BengaluruPolitics

ಶಕ್ತಿ ಯೋಜನೆ ಹೆಸರಿಡಲು ಕಾರಣ ಏನು ಗೊತ್ತಾ..?; ಸಿಎಂ ಉತ್ತರ ಕೊಟ್ಟಿದ್ದಾರೆ..

ಬೆಂಗಳೂರು; ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ, ಮಹಿಳೆಯರಿಗೆ ಪುರುಷರಷ್ಟೇ ಅವಕಾಶ ಸಿಗಬೇಕು. ಹೀಗಾಗಿ ಮಹಿಳೆಯರಿಗೆ ಶಕ್ತಿ ತುಂಬೋದಕ್ಕಾಗಿ ಯೋಜನೆಗೆ ಶಕ್ತಿ ಎಂದು ಹೆಸರಿಡಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಾವು ನೀಡಿರೋ ಐದು ಗ್ಯಾರಂಟಿ ಪೈಕಿ ನಾಲ್ಕು ಗ್ಯಾರಂಟಿಗಳು ಮಹಿಳೆಯರಿಗೆ ಸಂಬಂಧಿಸಿದ್ದೇ ಆಗಿವೆ. ಇದನ್ನು ಕೆಲವರು ಗೇಲಿ ಮಾಡುತ್ತಾರೆ. ಮಾಡಿಕೊಳ್ಳಲಿ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು. ಈ ರೀತಿ ಕುಹಕವಾಡೋರಿಗೆ ನಾವು ಸೊಪ್ಪು ಹಾಕೋದಿಲ್ಲ ಎಂದೂ ಅವರು ಹೇಳಿದರು.

ಸಮಾಜ ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕಾದರೆ ಪುರುಷರಷ್ಟೆ ಮಹಿಳೆಯರಿಗೆ ಅವಕಾಶ ಸಿಗಬೇಕು. ಇಲ್ಲದಿದ್ರೆ ದೇಶದ ಅಭಿವೃದ್ಧಿ ಸಾಧ್ಯವಾಗೋದಿಲ್ಲ. ಯಾವುದೇ ಅಭಿವೃದ್ಧಿ ಹೊಂದಿದ ದೇಶದಲ್ಲಿ ಮಹಿಳೆಯರೇ ಹೆಚ್ಚು ಅವಕಾಶ ಪಡೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಮೆರಿಕಾ, ಚೀನಾ, ಆಸ್ಟ್ರೇಲಿಯಾ, ಇಂಡೋನೇಷ್ಯಾ, ಬಾಂಗ್ಲಾದೇಶದಲ್ಲಿ ಹೆಚ್ಚು ಮಹಿಳೆಯರು ಪಾಲ್ಗೊಳ್ಳುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

Share Post