BengaluruPolitics

ಡಿಕೆಶಿಯನ್ನು ಸ್ವಾಗತಿಸಲು ಹೋಗದಿದ್ದಕ್ಕೆ ಸತೀಶ್‌ ಜಾರಕಿಹೊಳಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು; ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಿನ್ನೆ ಬೆಳಗಾವಿಗೆ ಭೇಟಿ ನೀಡಿದಾಗ ಶಾಸಕರು, ಸಚಿವರು ಯಾರೂ ಅವರನ್ನು ಸ್ವಾಗತಿಸೋದಕ್ಕೆ ಬಂದಿರಲಿಲ್ಲ. ಇದರಿಂದಾಗಿ ಬೆಳಗಾವಿ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಮಾತುಗಳು ಕೇಳಿಬಂದವು. ಈ ಬೆನ್ನಲ್ಲೇ ಸಚಿವ ಸತೀಶ್‌ ಜಾರಕಿ ಹೊಳಿ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಸತೀಶ್‌ ಜಾರಕಿಹೊಳಿ, ನೀವು ಬರುವಾಗ ನಾನು ಬೆಳಗಾವಿಯಲ್ಲಿ ಇರೋದಿಲ್ಲ ಎಂದು ಒಂದು ದಿನ ಮೊದಲೇ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿದ್ದೇನೆ. ಜೊತೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರು ಕೂಡ ಪ್ರವಾಸ ಹೋಗಿದ್ದರು ಎಂದು ಹೇಳಿದ್ದಾರೆ. ಅಂದಹಾಗೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬೆಳಗಾವಿ ಭೇಟಿ ಖಾಸಗಿ ಭೇಟಿ. ಹೀಗಾಗಿ ನಾವು ಅವರನ್ನು ಸ್ವಾಗತಿಸೋಕೆ ಹೋಗದೇ ಇರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸೋದು ಬೇಡ ಎಂದಿದ್ದಾರೆ.

ಹಲವು ಬಾರಿ ಕಾಂಪ್ರಮೈಸ್ ಮಾಡಿಕೊಳ್ಳಬೇಕಾಗುತ್ತದೆ. ಮುಂದೆಯೂ ನಾನು ಪಕ್ಷದ ಸಲುವಾಗಿ ಕಾಂಪ್ರಮೈಸ್ ಆಗುತ್ತೇನೆ ಎಂದೂ ಸತೀಶ್‌ ಜಾರಕಿಹೊಳಿ ತಮಗಿರುವ ಅಸಮಾಧಾನದ ಬಗ್ಗೆ ಹೇಳಿಕೊಂಡಿದ್ದಾರೆ.

 

Share Post