BengaluruPolitics

ಸಚಿವ ಸ್ಥಾನ ಕೊಟ್ಟರೂ ಜಮೀರ್‌ಗೆ ಪ್ರಮಾಣ ಬೋಧಿಸಬೇಡಿ; ರಾಜ್ಯಪಾಲರಿಗೆ ಪತ್ರ

ಬೆಂಗಳೂರು; ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಅವಕಾಶ ಸಿಕ್ಕರೂ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ನವಭಾರತ ಸೇನಾ ಪಕ್ಷದ ಸಂಚಾಲಕ ರುಕ್ಮಾಂಗದ ಎಂಬುವವರು ಈ ಮನವಿ ಮಾಡಿದ್ದಾರೆ.

ಚುನಾವಣೆ ವೇಳೆ ಜಮೀರ್‌ ಸಲ್ಲಿಸಿರುವ ನಾಮಪತ್ರದಲ್ಲಿ ದೋಷಗಳು ಕಂಡಿವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೂಡಾ ಕೊಟ್ಟಿದ್ದೇವೆ. ಹೀಗಿದ್ದರೂ ಸ್ಪರ್ಧೆಗೆ ಅವಕಾಶ ಸಿಕ್ಕಿತ್ತು. ಈಗ ಕೋರ್ಟ್‌ ಮೊರೆ ಹೋಗುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಜಮೀರ್‌ಗೆ ಸಚಿವ ಸ್ಥಾನ ನೀಡಬಾರದು. ಕಾಂಗ್ರೆಸ್‌ ನೀಡಿದರೂ ರಾಜ್ಯಪಾಲರು ಪ್ರಮಾಣವಚನ ಬೋಧನೆ ಮಾಡಬಾರದು ಎಂದು ಒತ್ತಾಯಿಸಲಾಗಿದೆ.

Share Post