BengaluruCrime

ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಸಂಕಷ್ಟ; ಸಿಬಿಐನಿಂದ ನೋಟಿಸ್‌ ಜಾರಿ

ನವದೆಹಲಿ; ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್‌ ಕುಟುಂಬಕ್ಕೆ ನೋಟಿಸ್‌ ಜಾರಿ ಮಾಡಿದೆ. ಹೂಡಿಕೆ ಮಾಡಿರೋ ಬಗ್ಗೆ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಇದೇ ಪ್ರಕರಣದಲ್ಲಿ ಮಲೆಯಾಳಂ ಸುದ್ದಿ ವಾಹಿನಿ ಜೈ ಹಿಂದ್‌ ಎಂಡಿ ಬಿ.ಎಸ್ ಶಿಜುಗೆ ಕೂಡಾ ನೋಟಿಸ್‌ ನೀಡಲಾಗಿದೆ. ಈ ಸಂಸ್ಥೆಯಲ್ಲಿ ಡಿ.ಕೆ.ಶಿವಕುಮಾರ್‌ ಹೂಡಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮಾಹಿತಿ ನೀಡುವಂತೆ ಸುದ್ದಿ ವಾಹಿನಿ ಎಂಡಿ ಶಿಜುಗೆ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ನೀಡುವಂತೆ CRPC ಸೆಕ್ಷನ್ 91ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಎಂಡಿ ಬಿ.ಎಸ್ ಶಿಜು ಅವರು ಜನವರಿ 11ಕ್ಕೆ ಸಿಬಿಐ ವಿಚಾರಣೆಗೆ ಹಾಜರಾಗಬೇಕಿದೆ.

 

Share Post