Bengaluru

ಮುಂಬರುವ ಚುನಾವಣೆಗೆ ಬಿಜೆಪಿ ತಯಾರಿ; ಮೇ 3ಕ್ಕೆ ಬರ್ತಾರೆ ಅಮಿತ್‌ ಷಾ

ಬೆಂಗಳೂರು; ರಾಜ್ಯದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ರಣತಂತ್ರ ಹೆಣೆಯುತ್ತಿದೆ. ಈಗಾಗಲೇ ಏಪ್ರಿಲ್‌ 1 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ರಾಜ್ಯಕ್ಕೆ ಬಂದು ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿದ್ದರು. ಇದೀನ ಮತ್ತೆ ಮುಂದಿನ ತಿಂಗಳು ಅಂದರೆ ಮೇ 3 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 

ಖೇಲೋ ಇಂಡಿಯ ಸಮಾರೋಪ ಸಮಾರಂಭದ ಹಿನ್ನೆಲೆಯಲ್ಲಿ ಅಮಿತ್‌ ಷಾ ಬೆಂಗಳೂರಿಗೆ ಬರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ನಾಯಕರ ಜೊತೆ ಅವರು ಚರ್ಚೆ ನಡೆಸಲಿದ್ದಾರೆ. ಮುಂದಿನ ಚುನಾಔಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡರು ಅವರು ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಲು ತಣತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

 

Share Post