BengaluruCrimeDistricts

ಸರ್ಕಾರಿ ಬಸ್‌ಗೆ ದಂತದಿಂದ ತಿವಿದ ಕಾಡಾನೆ

ಮಂಗಳೂರು; ಪುತ್ತೂರರು ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಸ್ಲೀಪರ್ ಕೋಚ್ ಬಸ್‍ ಗೆ ಕಾಡಾನೆಯೊಂದು ದಂತದಿಂದ ತಿವಿದಿದೆ. ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪ ಈ ಘಟನೆ ನಡೆದಿದೆ.

ಕಾಡಾನೆ ದಾಳಿಯಿಂದ ಬಸ್‍ ನ ಒಂದು ಭಾಗಕ್ಕೆ ಹಾನಿಯಾಗಿದೆ. ಆದ್ರೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಬಸ್ ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಆನೆ ರಸ್ತೆ ಬದಿಯಲ್ಲಿ ನಿಂತಿತ್ತು. ಇದನ್ನು ನೋಡಿದ ಚಾಲಕ ಆನೆಯನ್ನು ತಪ್ಪಿಸಲು ಬಸ್‌ನ್ನು ಪಕ್ಕಕ್ಕೆ ತಿರುಗಿಸಿದ್ದಾರೆ. ಇದೇ ವೇಳೆ ಆನೆ ದಂತದಿಂದ ತಿವಿದಿದೆ.

Share Post