BengaluruPolitics

ಧರಣಿ ಅಂತ್ಯ; ಡಿಕೆಶಿ ಭೇಟಿಯಾಗಲು ಅರಮನೆ ಮೈದಾನಕ್ಕೆ ಬಂದ ಶಾಸಕ ಮುನಿರತ್ನ

ಬೆಂಗಳೂರು; ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಎಂದು ಶಾಸಕ ಮುನಿರತ್ನ ಅವರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದರು. ಒಬ್ಬಂಟಿಯಾಗಿ ಕೆಲಕಾಲ ಧರಣಿ ನಡೆಸಿದ ಅವರು ಈಗ ಧರಣಿ ವಾಪಸ್‌ ಪಡೆದುಕೊಂಡಿದ್ದಾರೆ. ನೇರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಅನುದಾನ ಕೇಳಲು ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬೆಂಗಳೂರಿನ ಅರಮನೆ ಮೈದಾನಕ್ಕೆ ಆಗಮಿಸಿದ್ದಾರೆ.

ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಭಾಗವಹಿಸಿದ್ದಾರೆ. ಹೀಗಾಗಿ ಅಲ್ಲಿಯೇ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಅನುದಾಣ ಕೇಳಲು ಮುನಿರತ್ನ ಬಂದಿದ್ದಾರೆ. ನಿನ್ನೆ ಮಾತನಾಡಿದ ಮುನಿರತ್ನ ಕ್ಷೇತ್ರದ ಅಭಿವೃದ್ಧಿಗಾಗಿ ಡಿ.ಕೆ.ಶಿವಕುಮಾರ್‌ ಕಾಲು ಹಿಡಿದು ಅನುದಾನ ಕೇಳುತ್ತೇನೆ ಎಂದು ಹೇಳಿದ್ದರು. ಹೀಗಾಗಿ, ಅರಮನೆ ಮೈದಾನದಲ್ಲಿ ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ.

 

Share Post