BengaluruCrime

ಎದೆಗೆ ಗುಂಡು ಹಾರಿಸಿಕೊಂಡು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ನೆಲಮಂಗಲ; ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಬೆಂಗಳೂರು ಉತ್ತರ ತಾಲ್ಲೂಕಿನ ಭವಾನಿ ನಗರದಲ್ಲಿ ಕೊಡಗು ಮೂಲದ 19 ವರ್ಷ ವಿದ್ಯಾರ್ಥಿ ವಿಶು ಉತ್ತಪ್ಪ ಆತ್ಮಹತ್ಯೆಕೊಂಡಾತ. ಈತ ಮೊದಲ ವರ್ಷದ ಬಿಇ ಓದುತ್ತಿದ್ದ ಎಂದು ತಿಳಿದುಬಂದಿದೆ.

ತನ್ನ ತಂದೆಯ ಗನ್‌ನಿಂದ ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿಶು ಉತ್ತಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವಿಶು ಉತ್ತಪ್ಪ ತಂದೆ ಕೊಡಗು ಮೂಲದ ತಮ್ಮಯ್ಯ ನೈಸ್​ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಕುಟುಂಬ ಸಮೇತ ಮಾದನಾಯಕನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಭವಾನಿನಗರದಲ್ಲಿ 15 ವರ್ಷಗಳಿಂದ ವಾಸವಿದ್ದರು.

ಗುಂಡು ಹಾರಿಸಿಕೊಂಡ ನಂತರ ತಂದೆಗೆ ಕರೆ ಮಾಡಿರುವ ವಿಶು ಉತ್ತಪ್ಪ ನಾನು ಇನ್ನು ತಪ್ಪು ಮಾಡುವುದಿಲ್ಲ ಎಂದಿದ್ದಾನೆ. ಗಾಬರಿಗೊಂಡ ತಂದೆ ಮನೆಗೆ ಬಂದು ನೋಡಿದಾಗಿ ವಿಶು ಉತ್ತಪ್ಪ ರಕ್ತದಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಉಳಿಯಲಿಲ್ಲ.

 

Share Post