Bengaluru

ESHWARAPPA ISSUE: RSS ಸಂಸ್ಕೃತಿ ಹೇರಲು ಬಿಜೆಪಿ ಷಡ್ಯಂತ್ರ; ಬಿ.ಕೆ.ಹರಿಪ್ರಸಾದ್‌ ಆರೋಪ

ಬೆಂಗಳೂರು: ಆರ್‌ಎಸ್‌ಎಸ್‌ ಸಂಸ್ಕೃತಿ ಹೇರಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ (BK HARIPRASAD) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಈಶ್ವರಪ್ಪ (ESHWARAPPA) ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ರಾಷ್ಟ್ರಧ್ವಜದ ಜಾಗಕ್ಕೆ ಕೇಸರಿ ಧ್ವಜ ಬರಬಹುದು ಎಂದು ಹೇಳಿ, ದೇಶಕ್ಕೆ ಅಪಮಾನ ಮಾಡಿದ್ದಾರೆ. ಹೀಗಾಗಿ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಸರ್ಕಾರ ಈಶ್ವರಪ್ಪ ಅವರ ರಾಜೀನಾಮೆ ಪಡೆಯಲೇಬೇಕು. ಅಲ್ಲಿಯವರೆಗೂ ಕಾಂಗ್ರೆಸ್‌ ಪ್ರತಿಭಟನೆ ನಿಲ್ಲಿಸೋದಿಲ್ಲ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

Share Post