Bengaluru

ESHWARAPPA ISSUE: ವಿರೋಧ ಪಕ್ಷ ಜವಾಬ್ದಾರಿ ಮರೆತಿದೆ; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು:  ಸಚಿವ ಈಶ್ವರಪ್ಪ ಹೇಳಿಕೆಯಲ್ಲಿ ಕಾನೂನು ವಿರೋಧಿ ಅಂಶಗಳಿಲ್ಲ. ಆದರೂ ವಿರೋಧ ಪಕ್ಷ ಕಾಂಗ್ರೆಸ್‌ ಯಾವುದೋ ಒಂದು ಹೇಳಿಕೆ ಮೇಲೆ ಧರಣಿ ಮಾಡುತ್ತಿದೆ. ವಿರೋಧ ಪಕ್ಷ ತನ್ನ ಜವಾಬ್ದಾರಿ ಮರೆತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಕೇವಲ ರಾಜಕೀಯ ಮಾಡೋದಕ್ಕೆ ಹೋರಾಟ ಮಾಡುತ್ತಿದೆ. ಕಾಂಗ್ರೆಸ್‌ ಪಕ್ಷದ ಧೋರಣೆ ನನಗೆ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share Post