Bengaluru

ESHWARAPPA ISSUE: ಸದನದಲ್ಲಿ ಇಂದೂ ಮುಂದುವರೆದ ಗದ್ದಲ

ಬೆಂಗಳೂರು: ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಸದಸ್ಯರು ಇಂದೂ ಪ್ರತಿಭಟನೆ ನಡೆಸಿದ್ದಾರೆ. ಪರಿಷತ್‌ ಕಲಾಪ ಆರಂಭವಾಗುತ್ತಿದ್ದಂತೆ, ಪ್ರತಿಭಟನೆ ಶುರು ಮಾಡಿದ ಕಾಂಗ್ರೆಸ್‌ ಸದಸ್ಯರು, ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದರು. ಭಿತ್ತಿಪತ್ರಗಳನ್ನು ಹಿಡಿದು ಈಶ್ವರಪ್ಪ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಇತ್ತ ಬಿಜೆಪಿ ಸದಸ್ಯರು ಕೂಡಾ ಕಾಂಗ್ರೆಸ್‌ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್‌ ಸದಸ್ಯರು ಬಿಜೆಪಿಗೆ ಧಿಕ್ಕಾರ ಕೂಗಿದರೆ, ಇತ್ತ ಬಿಜೆಪಿ ಸದಸ್ಯರು ಜೈಶ್ರೀರಾಮ್‌ ಎಂದು ಘೋಷಣೆಗಳನ್ನು ಕೂಗಿದರು. ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಎಷ್ಟೇ ಹೇಳಿದರೂ ಯಾರೂ ಕೇಳದ ಸ್ಥಿತಿಯಲ್ಲಿದ್ದರು. ಹೀಗಾಗಿ ಹೊರಟ್ಟಿ ಗರಂ ಆದರು. ಕಲಾಪವನ್ನು ಕೆಲಕಾಲ ಮುಂದೂಡಿದರು.

Share Post