Bengaluru

ESHWARAPPA ISSUE: ಕಾಂಗ್ರೆಸ್‌ ಪ್ರತಿಭಟನೆ ಹಿನ್ನೆಲೆ; ಕಲಾಪ ನಾಳೆಗೆ ಮುಂದೂಡಿಕೆ

ಬೆಂಗಳೂರು: ರಾಷ್ಟ್ರಧ್ವಜದ ಬಗ್ಗೆ ಹೇಳಿಕೆ ನೀಡಿರುವ ಸಚಿವ ಕೆ.ಎಸ್‌.ಈಶ್ವರಪ್ಪ ರಾಜೀನಾಮೆಗೆ ವಿಪಪಕ್ಷಗಳು ಪಟ್ಟು ಹಿಡಿದಿವೆ. ಹೀಗಾಗಿ ಇಂದಿನ ಕಲಾಪ ಪ್ರತಿಭಟನೆಯಲ್ಲೇ ಮುಗಿದುಹೋಗಿದೆ. ಇಂದು ವಿಧಾನಸಭಾ ಕಲಾಪ ಶುರುವಾಗುತ್ತಿದ್ದಂತೆ, ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಸದನ ಬಾವಿಗಿಳಿದು ಹೋರಾಟ ನಡೆಸಲಾಯಿತು.

ಕಾಂಗ್ರೆಸ್‌ ಪ್ರತಿಭಟನೆಯಿಂದಾಗಿ ವಿಧಾನಸಭಾ ಕಲಾಪವನ್ನು ಮಧ್ಯಾಹ್ನ ೩.೩೦ಕ್ಕೆ ಮುಂದೂಡಲಾಗಿತ್ತು. ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷದ ಶಾಸಕರು ಪತ್ತೆ ಪ್ರತಿಭಟನೆ ಶುರು ಮಾಡಿದರು. ಈ ಹಿನ್ನೆಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

Share Post