Bengaluru

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್‌.ಈಶ್ವರಪ್ಪ

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗದಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬಂದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಇದಕ್ಕೂ ಮೊದಲ ಈಶ್ವರಪ್ಪ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಹಿರಿಯ ಶ್ರೀಗಳ ಗದ್ದುಗೆ ವಿಶೇಷ ಪೂಜೆ ಸಲ್ಲಿಸಿದರು. ಈಶ್ವರಪ್ಪ ಅವರ ಜೊತೆ ಶಿವಮೊಗ್ಗದಿಂದ ಬೆಂಗಳೂರಿನ ಐವತ್ತು ಕಾರುಗಳಲ್ಲಿ ಬೆಂಗಳೂರಿಗೆ ಆಗಮಿಸಿದ್ದರು.  ಇನ್ನು ಈಶ್ವರಪ್ಪ ಅವರು ರಾಜೀನಾಮೆ ನಂತರ ರೈಲಿನಲ್ಲಿ ಇಂದು ರಾತ್ರಿಯೇ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ರಾತ್ರಿ 11 ಗಂಟೆಯ ರೈಲಿನಲ್ಲಿ ಅವರು ಶಿವಮೊಗ್ಗಕ್ಕೆ ಹೋಗಲಿದ್ದಾರೆ ಎಂದು ತಿಳಿದುಬಂದಿದೆ.

Share Post