BengaluruPolitics

ಚುನಾವಣಾ ರಾಜಕಾರಣದಿಂದ ಹಿಂದೆ ಸರಿದ ಈಶ್ವರಪ್ಪ; ನಡ್ಡಾಗೆ ಪತ್ರ

ಬೆಂಗಳೂರು; ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಬಗ್ಗೆ ದೊಡ್ಡ ವಾಗ್ಯುದ್ಧವೇ ನಡೆಯುತ್ತಿತ್ತು. ಆಯನೂರು ಮಂಜುನಾಥ್‌ ಅವರು ಈಶ್ವರಪ್ಪ ವಿರುದ್ಧ ಸಮರವನ್ನೇ ಸಾರಿದ್ದರು. ಹೀಗಿರುವಾಗಲೇ ಮಾಜಿ ಸಚಿವ ಈಶ್ವರಪ್ಪ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಪತ್ರ ಕೂಡಾ ಬರೆದಿದ್ದಾರೆ. 

ನಾನು ನಲವತ್ತು ವರ್ಷದಿಂದ ರಾಜಕೀಯದಲ್ಲಿದ್ದೇನೆ. ಬೂತ್‌ ಮಟ್ಟದಿಂದ ಉಪಮುಖ್ಯಮಂತ್ರಿಯಾಗುವವರೆಗೆ ಪಕ್ಷ ನನ್ನನ್ನು ಬೆಳೆಸಿದೆ. ಈಗ ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬೇಡಿ ಎಂದು ಜೆಪಿ ನಡ್ಡಾಗೆ ಬರೆದ ಪತ್ರದಲ್ಲಿ ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಈಶ್ವರಪ್ಪ ಹಾಗೂ ಯಡಿಯೂರಪ್ಪ ಇಬ್ಬರೇ ಬಿಜೆಪಿಯ ಪ್ರಮುಖ ನಾಯಕರು. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರಲ್ಲೂ ಇವರೇ ಪ್ರಮುಖರು. ಇದೀಗ ಈ ಇಬ್ಬರೂ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

Share Post