BengaluruPolitics

ನನಗೆ ಕ್ಲೀನ್‌ ಚಿಟ್‌ ಸಿಕ್ಕಿದೆ – ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ; ಕೆ.ಎಸ್‌.ಈಶ್ವರಪ್ಪ

ಬೆಂಗಳೂರು; ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ನನಗೆ ಕ್ಲೀನ್‌ ಚಿಟ್‌ ಸಿಕ್ಕಿದೆ. ನಾನು ಈಗ ಆರೋಪಮುಕ್ತನಾಗಿದ್ದೇವೆ. ಹೀಗಾಗಿ ನನಗೆ ಸಚಿವ ಸ್ಥಾನ ಅಥವಾ ಪಕ್ಷ ಸಂಘಟನೆಯಲ್ಲಿ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ತಪ್ಪು ಮಾಡಿಲ್ಲ. ಆರೋಪಮುಕ್ತನಾಗಿ ಬರುತ್ತೇನೆ ಎಂದು ಹೇಳಿದ್ದೆ. ಅದು ಈಗ ಸಾಬೀತಾಗಿದೆ ಎಂದು ಹೇಳಿದರು.

ಆರೋಪಮುಕ್ತನಾದ ಮೇಲೆ ನಾನು ಮತ್ತೆ ಸಚಿವ ಸಂಪುಟ ಸೇರುತ್ತೇನೆ ಎಂದು ಹೇಳಿರಲಿಲ್ಲ. ನಾನು ಆರೋಪಮುಕ್ತನಾಗಿ ಬರುತ್ತೇನೆ ಎಂದಷ್ಟೇ ಹೇಳಿದ್ದೆ. ನಾನು ಈಗ ಆರೋಪಮುಕ್ತನಾಗಿದ್ದೇನೆ. ಪಕ್ಷ ಯಾವುದೇ ನಿರ್ಧಾರ ಕೈಗೊಂಡರೂ ನಾನು ಅದಕ್ಕೆ ಬದ್ಧನಾಗಿರುತ್ತೇವೆ. ಈ ಬಗ್ಗೆ ನಾನು ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ.

Share Post