BengaluruPolitics

ಆಗಸ್ಟ್‌ನಿಂದ ಯಡಿಯೂರಪ್ಪ ರಾಜ್ಯ ಪ್ರವಾಸ

ಬೆಂಗಳೂರು; ಮಾಜಿ ಸಿಎಂ ಯಡಿಯೂರಪ್ಪ ಮತ್ತೆ ರಾಜಕೀಯದಲ್ಲಿ ತಮ್ಮ ಪ್ರಾಬಲ್ಯ ಮೆರೆಯಲು ಸಿದ್ಧತೆ ನಡೆಸಿದ್ದಾರೆ. ಆಗಸ್ಟ್‌ ಮೊದಲ ವಾರದಿಂದ ಅವರು ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಹೈಕಮಾಂಡ್‌ ಇದಕ್ಕೆ ಗ್ರೀನ್‌ ಸಿಗ್ನಲ್‌ ಸೂಚಿಸಿರುವುದರಿಂದ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ಬಲಪಡಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

 

ಸಿಎಂ ಸ್ಥಾನದಿಂದ ಕೆಳಗಿದ ಕೆಲ ದಿನಗಳಲ್ಲೇ ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿದ್ದರು. ಅದಕ್ಕಾಗಿ ಒಂದು ಹೊಸ ಕಾರನ್ನು ಕೂಡಾ ತರಿಸಿಕೊಂಡಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್‌ ಸದ್ಯಕ್ಕೆ ಬೇಡ ಎಂದಿದ್ದರಿಂದ ಯಡಿಯೂರಪ್ಪ ಸುಮ್ಮನಾಗಿದ್ದರು. ಆದ್ರೆ, ಈಗ ಚುನಾವಣೆಗಳು ಹತ್ತಿರವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಪಕ್ಷದ ಬಲವರ್ಧನೆ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ಬಿಜೆಪಿ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ ಎನ್ನಲಾಗಿದೆ.

Share Post