BengaluruPolitics

ಮೇಲುಕೋಟೆಯಲ್ಲಿ ರೈತ ಸಂಘದ ದರ್ಶನ್‌ಗೆ ಬೆಂಬಲ; ಕೆಪಿಸಿಸಿ ಕಚೇರಿಯಲ್ಲಿ ಚರ್ಚೆ

ಬೆಂಗಳೂರು; ಮೇಲುಕೊಟೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ದರ್ಶನ್‌ ಪುಟ್ಟಣ್ಣಯ್ಯ ಕಾಂಗ್ರೆಸ್‌ ಬೆಂಬಲ ನೀಡಿತ್ತು. ಈ ಬಾರಿಯೂ ಕೂಡಾ ಕಾಂಗ್ರೆಸ್‌ನಿಂದ ಅಭ್ಯರ್ಥಿಯನ್ನು ಹಾಕದೆ ದರ್ಶನ್‌ ಪುಟ್ಟಣ್ಣಯ್ಯಗೆ ಬೆಂಬಲ ನೀಡುವ ಬಗ್ಗೆ ಚರ್ಚೆ ನಡೆದಿದೆ. ಈ ಸಂಬಂಧ ಇಂದು ಕೆಪಿಸಿಸಿ ಕಚೇರಿಯಲ್ಲಿ ಚರ್ಚೆ ನಡೆಯಿತು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ದರ್ಶನ್‌ ಪುಟ್ಟಣ್ಣಯ್ಯ ಕೂಡಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರೈತ ಸಂಘ ಅತ್ಯಂತ ಪ್ರಬಲವಾಗಿದೆ. ಹೀಗಾಗಿ ಜೆಡಿಎಸ್‌ಗೆ ಸೆಡ್ಡು ಹೊಡೆಯಲು ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಹಾಕದೆ ದರ್ಶನ್‌ ಪುಟ್ಟಣ್ಣಯ್ಯಗೆ ಬೆಂಬಲಿಸಲು ಮುಂದಾಗಿದೆ.

Share Post