BengaluruPolitics

ರಾಮನಗರ ಜಿಲ್ಲೆ ಹೆಸರು ಬದಲಿಸಿದರೆ ಉಪವಾಸ; ಹೆಚ್ಡಿಕೆ

ಬೆಂಗಳೂರು; ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಬಾರದು. ಹಾಗೇನಾದರೂ ಮಾಡಿದರೆ ಅಮರಣಾಂತ ಉಪವಾಸ ಮಾಡಬೇಕಾಗುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ರಾಮನಗರ ಜಿಲ್ಲೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಹೆಚ್ಡಿಕೆ ಮಾತನಾಡಿದರು. ನಾನು ಡಿಕೆಶಿ ಸವಾಲು ಸ್ವೀಕರಿಸುತ್ತೇನೆ. ನನ್ನ ಆರೋಗ್ಯ ಲೆಕ್ಕಿಸದೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದಿದ್ದಾರೆ.

 

Share Post