BengaluruPolitics

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪುವ ಭೀತಿ; ನಿವೃತ್ತಿಗೆ ಚಿಂತಿಸುತ್ತಿದ್ದಾರಾ ಬಿಜೆಪಿ ಸಂಸದರು..?

ಬೆಂಗಳೂರು; ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ಈಗಿನಿಂದಲೇ ಸಿದ್ಧತೆ ಶುರುವಾಗಿದೆ. ಅದರಲ್ಲೂ ವಿಧಾನಸಭಾ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ರಾಜ್ಯದಲ್ಲಿ ಲೋಕಾಸಭಾ ಚುನಾವಣೆ ಗೆಲ್ಲಲು ಸಕಲ ತಯಾರಿ ನಡೆಸಿದೆ. ರಾಜ್ಯದಲ್ಲಿ ಹಾಲಿ ಇರುವ ಸಂಸದರಲ್ಲಿ 10-12 ಮಂದಿಗೆ ಟಿಕೆಟ್‌ ನೀಡೋದಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಹಲವು ಸಂಸದರು ಈ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಇದೇ ಕಾರಣಕ್ಕೆ ಕೆಲವರು ಈಗಾಗಲೇ ರಾಜಕೀಯ ನಿವೃತ್ತಿಯ ಮಾತನ್ನಾಡುತ್ತಿದ್ದಾರೆ.

ಕೆಲವರಿಗೆ ವಯಸ್ಸಾಗಿದೆ. ಇನ್ನು ಕೆಲವರು ನಿಷ್ಕ್ರಿಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹತ್ತರಿಂದ ಹನ್ನೆರಡು ಸಂಸದರಿಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್‌ ಸಿಗಲ್ಲ ಎಂಬ ಮಾತು ಕೇಳಿಬರುತ್ತಿದೆ. ಈ ಸುದ್ದಿ ಹರಿದಾಡುತ್ತಿದ್ದಂತೆ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂತಹ ಸುದ್ದಿಗಳು ಹರಿದಾಡುತ್ತಿದ್ದರೂ ಹೈಕಮಾಂಡ್‌ ಯಾಕೆ ಮೌನ ವಹಿಸಿದೆ ಎಂದು ಪ್ರಶ್ನೆ ಮಾಡಿದ್ದರು. ಈ ಬೆನ್ನಲ್ಲೇ ಇನ್ನೂ ಒಂದಷ್ಟು ಸಂಸದರು ಅಸಮಾಧಾನಗೊಂಡಂತೆ ಕಾಣುತ್ತಿದೆ.

ಚುನಾವಣಾ ನಿವೃತ್ತಿ ಪಡೆಯುವುದಾಗಿ ಸಂಸದ ಶಿವಕುಮಾರ್ ಉದಾಸಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸಂಸದ ಸಂಗಣ್ಣ ಕರಡಿ ಕೂಡಾ ಟಿಕೆಟ್‌ ಸಿಗದೇ ಇದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಎನ್ನಲಾಗಿದೆ.

 

Share Post