BengaluruCrime

ಸಾಕ್ಷ್ಯ ಹೇಳಿದರೆ ಮನೆಗೆ ಬೆಂಕಿ!; ಮುನಿರತ್ನ ಬೆಂಬಲಿಗರಿಂದ ಬೆದರಿಕೆ?

ಬೆಂಗಳೂರು; ಅತ್ಯಾಚಾರ ಹಾಗೂ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಶಾಸಕ ಮುನಿರತ್ನಂ ನಾಯ್ಡು ಜೈಲು ಸೇರಿದ್ದಾರೆ.. ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಬಂಧನವಾಗಿದೆ.. ಹೀಗಿರುವಾಗಲೇ ಶಾಸಕನ ಮುನಿರತ್ನಂ ನಾಯ್ಡು ಬೆಂಬಲಿಗರಿಂದ ಬೆದರಿಕೆ ಬರುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.. ಮುನಿರತ್ನ ಬೆಂಬಲಿಗರು ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ..
ಮುನಿರತ್ನ ವಿರುದ್ದ ಸಾಕ್ಷಿ ಹೇಳಿದರೆ ನಿಮ್ಮ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇಲ್ಲದಂತೆ ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಾಗಿದೆ.. ಈ ಬಗ್ಗೆ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.. ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಆಕೆಯನ್ನು ಬಳಸಿಕೊಂಡು ಆರೋಪವನ್ನು ಶಾಸಕ ಮುನಿರತ್ನ ಎದುರಿಸುತ್ತಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದೆ..

 

Share Post