BengaluruPolitics

ಮೊದಲ ಬಾರಿ ಶಾಸಕರಾದವರಿಗೆ, ಸೋತವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನವಿಲ್ಲ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಮೊದಲ ಬಾರಿ ಶಾಸಕರಾದವರು ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಪಡೆದು ಸೋತವರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ತೆಲಂಗಾಣ ಚುನಾವಣಾ ಇಂದು ಮುಗಿಯುತ್ತದೆ. ಹೀಗಾಗಿ ಆದಷ್ಟು ಬೇಗ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿ ರಿಲೀಸ್‌ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಸುರ್ಜೇವಾಲಾ ಹಾಗೂ ನಾನು ಸೇರಿ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲಾ ಅವರು ಪಟ್ಟಿಯನ್ನು ಹೈಕಮಾಂಡ್‌ಗೆ ಕೊಟ್ಟಿದ್ದಾರೆ. ಹೈಕಮಾಂಡ್‌ ಒಪ್ಪಿಗೆ ಪಡೆದು ಶೀಘ್ರದಲ್ಲೇ ಪಟ್ಟಿ ರಿಲೀಸ್‌ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮೊದಲ ಹಂತದಲ್ಲಿ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ನೀಡಲಾಗುತ್ತದೆ. ಅನಂತರ ಕಾರ್ಯಕರ್ತರಿಗೆ ಅವಕಾಶ ನೀಡಲಾಗುತ್ತದೆ ಎಂದೂ ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದ್ದಾರೆ.

 

Share Post