BengaluruHealth

ಮಾಜಿ ಸಿಎಂ ಕುಮಾರಸ್ವಾಮಿಗೆ ವಿಪರೀತ ಜ್ವರ; ಆಸ್ಪತ್ರೆಗೆ ದಾಖಲು

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ವಿಪರೀತ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿಯಿಂದ ಏಕಾಏಕಿ ಜ್ವರ ಕಾಣಿಸಿಕೊಂಡಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಇಂದು ಅವರು ಭಾಗವಹಿಸಬೇಕಾಗಿದ್ದ ಕಾರ್ಯಕ್ರಮಗಳು ರದ್ದಾಗಿವೆ.

ಕುಮಾರಸ್ವಾಮಿಯವರು ಇಂದು ಕೋಲಾರ ಜಿಲ್ಲೆ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಶ್ರೀನಿವಾಸಪುರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗಿದ್ದು, ಈ ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಅಲ್ಲಿಗೆ ಭೇಟಿ ನೀಡಿ ರೈತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದರು. ಆದ್ರೆ ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

Share Post