BengaluruCrime

ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಬೆಂಗಳೂರು; ದೂರದ ಕಲಬುರಗಿಯಿಂದ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದಿದ್ದ ಕುಟುಂಬ ಬದುಕು ಮುಗಿಸಿದೆ.. ಕ್ಯಾಬ್‌ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನ ಹೆಂಡತಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ರಾಜನುಕುಂಟೆ ಬಳಿಯ ಸಿಂಗನಾಯಕನಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ..
ಕ್ಯಾಬ್‌ ಚಾಲಕ 38 ವರ್ಷದ ಅವಿನಾಶ್‌, ಅವರ ಪತ್ನಿ 30 ವರ್ಷದ ಮಮತಾ ಹಾಗೂ ಮಕ್ಕಳಾದ 5 ವರ್ಷದ ಅಧೀರ್‌ ಹಾಗೂ 2.5 ವರ್ಷದ ಅಣ್ಣಯ್ಯ ಮೃತಪಟ್ಟವರು.. ಅವಿನಾಶ್‌ ಕಲಬುರಗಿಯವರಾಗಿದ್ದು, ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು.. ಕ್ಯಾಬ್‌ ಓಡಿಸುತ್ತಾ ಜೀವನ ಸಾಗಿಸುತ್ತಿದ್ದರು.. ರಾಜಾನುಕುಂಟೆ ಬಳಿಯ ಸಿಂಗನಾಯಕನಹಳ್ಳಿಯ ನರಸಪ್ಪ ಎಂಬುವವರ ಮನೆಯಲ್ಲಿ ಬಾಡಿಗೆಗಿದ್ದರು.. ಆದ್ರೆ ಇಂದು ಬೆಳಗ್ಗೆ ಎಷ್ಟು ಹೊತ್ತಾದರೂ ಮನೆಯ ಬಾಗಿಲು ತೆಗೆದಿಲ್ಲ.. ಇದರಿಂದ ಅನುಮಾನಗೊಂಡು ನೋಡಿದಾಗ, ಎಲ್ಲರೂ ಸಾವನ್ನಪ್ಪಿರುವುದು ಕಂಡುಬಂದಿದೆ.. ಪತಿ ನೇಣಿಗೆ ಶರಣಾಗಿದ್ದರೆ,ಪತ್ನಿ, ಮಕ್ಕಳಿಗೆ ವಿಷವುಣಿಸಿ ಕೊಲೆ ಮಾಡಲಾಗಿದೆ..
ಸ್ಥಳೀಯರು ಕೂಡಲೇ ಮೃತನ ಸಹೋದರಿಗೆ ಮಾಹಿತಿ ನೀಡಿದ್ದಾರೆ.. ಅವಿನಾಶ್‌ನ ಸಹೋದರ ಉದಯ್ ಕೂಡಲೇ ಸ್ಥಳಕ್ಕೆ ಬಂದಿದ್ದಾರೆ.. ಕುಟುಂಬದವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ರಾಜಾನುಕುಂಟೆ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ..

Share Post