BengaluruPolitics

ನಾಳೆಯಿಂದ ಅಕ್ಕಿಯ ಜೊತೆ ಹಣ ಕೊಡುತ್ತೇವೆ; ಸಚಿವ ಕೆ.ಹೆಚ್‌.ಮುನಿಯಪ್ಪ

ಬೆಂಗಳೂರು; ನಾಳೆಯಿಂದ ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ತಲಾ ಐದು ಕೆಜಿ ಅಕ್ಕಿ ಜೊತೆಗೆ ತಲಾ 170 ರೂಪಾಯಿ ಹಣ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾಳೆಯಿಂದ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬದ ಸದಸ್ಯರ ಬ್ಯಾಂಕ್‌ ಅಕೌಂಟ್‌ಗೆ ಹಣ ಸಂದಾಯ ಮಾಡಲಾಗುತ್ತದೆ ಎಂದು ಹೇಳಿದರು.

ನಮಗೆ ತಲಾ ಹತ್ತು ಕೆಜಿ ಅಕ್ಕಿ ಪೂರೈಕೆ ಮಾಡಲು ಅಕ್ಕಿ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿ ಕೊಡೋದಿಲ್ಲ ಎಂದು ಹೇಳಿಬಿಟ್ಟಿದೆ. ಹೀಗಾಗಿ ಬೇರೆ ವ್ಯವಸ್ಥೆ ಮಾಡುತ್ತಿದ್ದೇವೆ. ಟೆಂಡರ್‌ ಕರೆದು ಅಕ್ಕಿ ಖರೀದಿ ಮಾಡಲು ಮುಂದಾಗಿದ್ದೇವೆ. ಹೀಗಾಗಿ ಅಕ್ಕಿ ಸಿಗುವವರೆಗೂ ಹಣ ಕೊಡುತ್ತೇವೆ. ಅದಕ್ಕಾಗಿ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬದ ಸದಸ್ಯರು ಬ್ಯಾಂಕ್‌ ಖಾತೆ ಹೊಂದಿರಬೇಕು. ಬ್ಯಾಂಕ್‌ ಖಾತೆ ಇಲ್ಲದಿದ್ದರೆ ಕೂಡಲೇ ಮಾಡಿಸಬೇಕು ಎಂದು ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ.

Share Post