Bengaluru

ಸಂಕ್ರಾಂತಿಯಂದು ಗವಿಗಂಗಾಧರನ ದರ್ಶನಕ್ಕೆ ಬ್ರೇಕ್‌..!

ಬೆಂಗಳೂರು: ಕೊವಿಡ್‌ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಶೇ.50 ರಷ್ಟು ಭಕ್ತರಿಗೆ ಅವಕಾಶ ನೀಡಲಾಗಿತ್ತು. ಆದರೆ ಹಬ್ಬದ ದಿನಗಳಂದು ಹೆಚ್ಚು ಜನ ದೇವಸ್ಥಾನಗಳಿಗೆ ಹೋಗುವುದರಿಂದ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಸಂಕ್ರಾಂತಿ ಹಬ್ಬದಂದು ಬೆಂಗಳೂರಿನ ಗವಿಗಂಗಾಧರನಿಗೆ ಸೂರ್ಯರಶ್ಮಿ ಮುತ್ತಿಕ್ಕುತ್ತಾನೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಸಾವಿರಾರು ಜನ ಆಗಮಿಸುತ್ತಾರೆ. ಆದರೆ ಈ ಬಾರಿ ಇದಕ್ಕೆ ಅವಕಾಶವಿಲ್ಲ. ಬೆಂಗಳೂರಿನಲ್ಲಿ ಕೊರೊನಾ ಸೋಂಕು ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ಹಬ್ಬದ ದಿನ ಗವಿಗಂಗಾಧರನ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡದಿರಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

Share Post