BengaluruPolitics

ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಸೇರ್ಪಡೆ; ಶಿವರಾಜ್‌ಕುಮಾರ್‌ ಹೇಳಿದ್ದೇನು..?

ಬೆಂಗಳೂರು; ಗೀತಾ ಶಿವರಾಜ್‌ ಕುಮಾರ್‌ ಅವರು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್‌ ಸೇರುತ್ತಿದ್ದಾರೆ. ಅದಕ್ಕೂ ಮೊದಲು ಶಿವರಾಜ್‌ ಕುಮಾರ್‌ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೀತಾ ಅವರ ಸಹೋದರ ಮಧು ಬಂಗಾರಪ್ಪ ಸೊರಬದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಅವರ ಪ್ರರವಾಗಿ ಗೀತಾ ನಾಳೆಯಿಂದ ಪ್ರಚಾರ ಮಾಡಲಿದ್ದಾರೆ. ನಾನೂ ಕೂಡಾ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮಧು ಬಂಗಾರಪ್ಪ ಹಾಗೂ ಸಿರಸಿಯಲ್ಲಿ ಸ್ಪರ್ಧೆ ಮಾಡಿರುವ ಅವರ ಮಾವ ಭೀಮ ನಾಯಕ ಗೆಲ್ಲಬೇಕೆಂಬುದು ನಮ್ಮ ಅಭಿಲಾಷೆ. ಹೀಗಾಗಿ ಅವರ ಪರವಾಗಿ ನಾವು ಕೆಲಸ ಮಾಡಲಿದ್ದೇವೆ ಎಂದು ಶಿವರಾಜ್‌ ಕುಮಾರ್‌ ಹೇಳಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಈ ಹಿಂದೆ ಜೆಡಿಎಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋತಿದ್ದರು. ಅನಂತರ ರಾಜಕೀಯದಿಂದ ದೂರವಿದ್ದರು. ಇದೀಗ ಅವರು ಮತ್ತೆ ಸಹೋದರನಿಗಾಗಿ ರಾಜಕೀಯಕ್ಕೆ ಬರುತ್ತಿದ್ದಾರೆ.

 

Share Post