Bengaluru

ಹುಟ್ಟುಹಬ್ಬದ ದಿನವೇ ಅಪಘಾತ; ಯುವತಿ ದಾರುಣ ಸಾವು

ಬೆಂಗಳೂರು: ಹುಟ್ಟುಹಬ್ಬದ ದಿನವೇ ಯುವತಿಯೊಬ್ಬಳು ದಾರುಣ ಸಾವನ್ನಪ್ಪಿದ್ದಾಳೆ. ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ಬಿದ್ದು ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ.

   ಈ ದುರ್ಘಟನೆ ನಡೆದಿರುವುದು ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ. ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಶ್ರೀ ಮೃತಪಟ್ಟ ದುರ್ದೈವಿ. ಈಕೆ ಹೆಬ್ಬಾಳದ ಭದ್ರಪ್ಪ ಲೇಔಟ್‌ ನಿವಾಸಿಯಾಗಿದ್ದು, ಓದಿನ ಜೊತೆಗೆ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು.

ಇಂದು ಹುಟ್ಟುಹಬ್ಬವಿದ್ದುದರಿಂದ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಳು. ಈ ವೇಳೆ ಆಕೆ ಆಯತಪ್ಪಿ ಕೆಳಗೆ ಬಿದ್ದುಬಿಟ್ಟಿದ್ದಾಳೆ. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್‌ ವಾಹನ ಆಕೆಯ ಮೇಲೆ ಹರಿದಿದೆ.

Share Post