Bengaluru

ಕೋವಿಡ್‌ : ಸಂತ್ರಸ್ತ ಕುಟುಂಬಕ್ಕೆ ಜ.15ರೊಳಗೆ ಪರಿಹಾರ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬಗಳಿಗೆ ಜನವರಿ 15ರೊಳಗೆ ಸರ್ಕಾರದ ಪರಿಹಾರ ನೀಡುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಸೂಚಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರ ವಾರ್ಡ್ ನಲ್ಲಿರುವ ಶಾಸಕರ ಭವನದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ – 19ನಿಂದ ಮೃತಪಟ್ಟ 105 ವ್ಯಕ್ತಿಗಳ ಕುಟುಂಬದವರಿಗೆ ಪರಿಹಾರ ವಿತರಿಸಿದ ಅವರು, ಮನೆಯ ಸದಸ್ಯರನ್ನು ಕಳೆದುಕೊಂಡ ಕುಟುಂಬದವರು ಸಾಕಷ್ಟು ನೋವಿನಲ್ಲಿ ಇದ್ದಾರೆ. ಇಂತಹ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬುವುದು ಮತ್ತು ಪರಿಹಾರ ನೀಡುವುದು ನಮ್ಮ ಕರ್ತವ್ಯವಾಗಿದ್ದು, ಇದನ್ನು ಅಧಿಕಾರಿ ವರ್ಗ ತ್ವರಿತವಾಗಿ ಮಾಡಬೇಕು ಎಂದು ತಿಳಿಸಿದರು.ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತರಾದ ವ್ಯಕ್ತಿಯ ಕುಟುಂಬಗಳ ಆರೋಗ್ಯದ ಬಗ್ಗೆ ಆಶಾ ಕಾರ್ಯಕರ್ತೆಯರ ಮೂಲಕ ಪತ್ತೆ ಹಚ್ಚಿ ಜನವರಿ 15 ರೊಳಗೆ ಎಲ್ಲಾ ಕುಟುಂಬಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

Share Post