BengaluruCrime

ಎಸ್‌.ಆರ್‌.ವಿಶ್ವನಾಥ್‌ಗೆ ಕೊಲೆಗೆ ಸ್ಕೆಚ್‌ ಪ್ರಕರಣ; ಗೋಪಾಲಕೃಷ್ಣಗೆ ನೋಟಿಸ್‌

ಬೆಂಗಳೂರು: ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕೊಲೆಗೆ ಸ್ಕೆಚ್‌ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗೋಪಾಲಕೃಷ್ಣಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ರಾಜಾನುಕುಂಟೆ ಪೊಲೀಸರು ಗೋಪಾಲಕೃಷ್ಣಗೆ ಸೂಚಿಸಿದ್ದಾರೆ.

ನಿನ್ನೆಯಷ್ಟೇ ಮತ್ತೊಬ್ಬ ಆರೋಪಿ ಕುಳ್ಳ ದೇವರಾಜ್‌ನನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ರಾಜಾನುಕುಂಟೆ ಪೊಲೀಸ್‌ ಠಾಣೆಗೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಆಡಿಯೋ ದಾಖಲಾತಿಗಳನ್ನು ಒದಗಿಸಿದ್ದರು.

ಸಂಗ್ರಹವಾದ ದಾಖಲಾತಿಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಎಸ್‌.ಆರ್‌.ವಿಶ್ವನಾಥ್‌ ಕೊಲೆಗೆ ಸುಪಾರಿ ಕೊಟ್ಟಿದ್ದಾರೆಂಬ ಆರೋಪವಿರುದ್ಧ ಗೋಪಾಲಕೃಷ್ಣಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ವಿಡಿಯೋ ಬಹಿರಂಗವಾದ ದಿನವೂ ಕಾಂಗ್ರೆಸ್‌ ಮುಖಂಡರೂ ಆಗಿರುವ ಗೋಪಾಲಕೃಷ್ಣರನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸಿದ್ದರು.

Share Post