Bengaluru

ಸ್ಮಶಾನ ಭೂಮಿಯನ್ನು ಖರೀದಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ

ಬೆಂಗಳೂರು: ಜನವಸತಿ ಪ್ರದೇಶಗಳಿಗೆ ಮತ್ತು ಗ್ರಾಮಗಳಿಗೆ ಹತ್ತಿರದಲ್ಲಿ ಸ್ಮಶಾನ ಭೂಮಿಯನ್ನು ನೇರವಾಗಿ ಖರೀದಿ ಮಾಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅರಣ್ಯ ಭೂಮಿ ಅಥವಾ ನೇರ ಖರೀದಿ ಮೂಲಕ ಸ್ಮಶಾನ ಭೂಮಿ ಒದಗಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.

ಬಾಗಲಕೋಟೆ ಜಿಲ್ಲೆಯ 126 ಗ್ರಾಮಗಳಿಗೆ ಸ್ಮಶಾನ ಭೂಮಿಯು ದೊರಕದೇ ತೊಂದರೆಯಾಗಿದೆ ಎಂದು ಸಚಿವರು ತಿಳಿಸಿದರು.

Share Post