BengaluruCrime

ಬೆಂಗಳೂರಿನಲ್ಲಿ ಮುಂಜಾನೆಯೇ ಗುಂಡಿನ ಸದ್ದು; ಏನಾಯ್ತು ಗೊತ್ತಾ..?

ಬೆಂಗಳೂರು; ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಜನರನ್ನು ಸುಲಿಗೆ ಮಾಡೋದು, ರಾಬರಿ ಮಾಡೋದು ಮಾಡುತ್ತಾ ಪೊಲೀಸರಿಗೆ ತಲೆನೋವಾಗಿದ್ದ ಖತರ್ನಾಕ್‌ ದರೋಡಕೋರನ ಕಾಳಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. 

ರಾಬರ್‌ ಯಾಸರ್‌ ಎಂಬ ಯುವಕನೇ ಸಿಕ್ಕಿಬಿದ್ದಿರುವ ಆಸಾಮಿ. ಈತ ಏಳಕ್ಕೂ ಹೆಚ್ಚು ರಾಬರಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆದ್ರೆ ಆತ ಚಾಲಾಕಿಯಾಗಿದ್ದ ಕಾರಣ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಸದಾಶಿವನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಲು ಹೋಗಿದ್ದರು. ಆಗ ಆತ ತಪ್ಪಿಸಿಕೊಂಡು ಎಸ್ಕೇಪ್‌ ಆಗಲು ಹೋಗಿದ್ದಾನೆ. ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್‌ ಮಾಡಲು ಯತ್ನಿಸಿದ್ದಾನೆ. ಆಗ ಶೇಷಾದ್ರಿಪುರಂ ಇನ್ಸ್ಪೆಕ್ಟರ್‌ ಆರೋಪಿಯ ಬಲಗಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ.

ಆರೋಪಿ ಯಾಸರ್‌ ಸುಲ್ತಾನ್‌ ಪಾಳ್ಯದ ಭುವನೇಶ್ವರ ನಗರದ ನಿವಾಸಿ ಎಂದು ತಿಳಿದುಬಂದಿದೆ. ಈತ ಮಾರಕಾಸ್ತ್ರಗಳಿಂದ ದಾಳಿ ದರೋಡೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

 

Share Post