Bengaluru

ಹಂಸಲೇಖ ಕಾಂಗ್ರೆಸ್‌ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರಂತೆ..!

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಮಾತನಾಡಿ, ವಿವಾದಕ್ಕೆ ಕಾರಣವಾಗಿದ್ದು ಸಂಗೀತ ನಿರ್ದೇಶಕ ಹಂಸಲೇಖಾ ರಾಜಕೀಯಕ್ಕೆ ಬರುತ್ತಿದ್ದಾರಾ..? ಇಂತಹದ್ದೊಂದು ಅನುಮಾನ ಮೂಡಿದೆ. ಯಾಕೆಂದ್ರೆ, ವಿವಾದ ನಂತರ ಹಂಸಲೇಖ ಅವರು, ಕಾಂಗ್ರೆಸ್‌ ನಾಯಕರ ಜೊತೆ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಡಿ.ಕೆ.ಶಿವಕುಮಾರ್‌ ಕರೆ ಹಿನ್ನೆಲೆಯಲ್ಲಿ ಹಂಸಲೇಖ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಸಿದ್ದರಾಮಯ್ಯ ಅವರ ಜೊತೆಗೂ ವೇದಿಕೆ ಹಂಚಿಕೊಂಡಿದ್ದರು. ಇದೀಗ, ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಹಂಸಲೇಖ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೇಕೆದಾಟು ಯೋಜೆನ ಜಾರಿಗಾಗಿ ಜನವರಿ ೯ ರಿಂದ ಪಾದಯಾತ್ರೆ ನಡೆಯಲಿದ್ದು, ಇದಕ್ಕೆ ಹಂಸಲೇಖ ಅವರೇ ಎರಡು ಹಾಡುಗಳನ್ನು ಬರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಂಸಲೇಖ ಅವರನ್ನು ಕಾಂಗ್ರೆಸ್​ ನಾಯಕರು ಭೇಟಿ ಮಾಡಿದ್ದಾರೆ. ಪಾದಯಾತ್ರೆಯಲ್ಲಿ ಭಾಗಿ ಆಗುವಂತೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.

Share Post