Bengaluru

HARSHA MURDER CASE: ಎಲ್ಲಾ ಆರೋಪಿಗಳನ್ನೂ ಬಂಧಿಸಿದ ಪೊಲೀಸರು; ಕೊಲೆಗೆ ಕಾರಣ ಗೊತ್ತಾ..?

ಬೆಂಗಳೂರು: ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಸಿಫ್‌ ಹಾಗೂ ನದೀಮ್‌ ಎಂಬುವವರು ಪ್ರಮುಖ ಆರೋಪಿಗಳಾಗಿದ್ದಾರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಹಿಜಾಬ್‌ ವಿಚಾರವಾಗಿಯೇ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ಹಿಜಾಬ್‌ ವಿರುದ್ಧದ ಹೋರಾಟದಲ್ಲಿ ಹರ್ಷ ಕೂಡಾ ಪಾಲ್ಗೊಂಡಿದ್ದರು ಎನ್ನಲಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್‌ ಹೋರಾಟ ಹೆಚ್ಚಾಗಲು ಹರ್ಷ ಕೂಡಾ ಕಾರಣವಿರಬಹುದೆಂದು ನಂಬಿ ಈ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ಇನ್ನೂ ಹಲವು ಆಯಾಮಗಳಿವೆ. ಕೊಲೆಗೆ ಕಾರಣ ಏನು ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.

ಪೊಲೀಸರು ಹೇಳುವ ಪ್ರಕಾರ ಐದು ಮಂದಿ ಆರೋಪಿಗಳು ಕಾರು ಮತ್ತು ಆಟೋದಲ್ಲಿ ಬಂದು ಹರ್ಷನನ್ನು ಕೊಲೆ ಮಾಡಿದ್ದಾರೆ. ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ.

Share Post