Bengaluru

HARSHA MURDER CASE: ಈಶ್ವರಪ್ಪ ಅವರೇ ಕಲ್ಲು ಹೊಡೆಸಿದ್ದಾರೆ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು: ಹರ್ಷ ಅಂತಿಮ ಯಾತ್ರೆ ವೇಳೆ ಸಚಿವ ಈಶ್ವರಪ್ಪ ಅವರೇ ಅಂಗಡಿಗಳ ಮೇಲೆ ಕಲ್ಲು ಹೊಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಿನ್ನೆ 144 ಸೆಕ್ಷನ್‌ ಜಾರಿ ಮಾಡಲಾಗಿತ್ತು. ಈ ನಿಯಮ ಉಲ್ಲಂಘಿಸಿ ಸಚಿವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸರ್ಕಾರದ ಸಚಿವರೇ ಕಾನೂನು ಉಲ್ಲಂಘಿಸಿದ್ದಾರೆ. ಸಚಿವರ ಕುಮ್ಮಕ್ಕಿನಿಂದಲೇ ನಿನ್ನೆ ದಾಳಿಗಳು ನಡೆದಿವೆ ಎಂದು ಡಿ.ಕೆ.ಶಿವಕುಮಾರ್‌ ಇದೇ ಸಂದರ್ಭದಲ್ಲಿ ಆರೋಪ ಮಾಡಿದ್ದಾರೆ.

Share Post