BengaluruDistrictsPolitics

ನಾಳೆ ಹಾಸನ ಜೆಡಿಎಸ್‌ ಟಿಕೆಟ್‌ ಫೈನಲ್‌..?; ಬೆಂಗಳೂರಿನಲ್ಲಿ ಸಭೆ

ಬೆಂಗಳೂರು; ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಯಾರಿಗೆ ಕೊಡಬೇಕು ಎಂಬುದರ ಬಗ್ಗೆ ಗೊಂದಲ ಉಂಟಾಗಿದೆ. ಸ್ವರೂಪ್‌ ಅವರು ಹಾಸನ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಇದರ ನಡುವೆ ಭವಾನಿ ರೇವಣ್ಣ ಅವರು ಹಾಸನದಿಂದ ನನಗೇ ಟಿಕೆಟ್‌ ಕೊಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ನಡುವೆ ರೇವನ್ಣ ಅವರು ಪಕ್ಷ ಸೂಚಿಸಿದರೆ ನಾನೇ ಹಾಸನದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿದ್ದು, ನಾಳೆ ಅಭ್ಯರ್ಥಿ ಫೈನಲ್‌ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಾಳೆ ಈ ಬಗ್ಗೆ ಚರ್ಚೆ ಮಾಡುವ ಸಲುವಾಗಿ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಆದ್ರೆ ಈ ಸಭೆಗೆ ರೇವಣ್ಣ ಅವರನ್ನು ಕರೆದಿಲ್ಲ. ಇನ್ನು ಈ ಬಗ್ಗೆ ಮಾತನಾಡಿರುವ ಕುಮಾರಸ್ವಾಮಿಯವರು, ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಹೇಳಿದ್ದೆ. ಈಗಲೂ ಕೂಡಾ ನಾನು ಅದೇ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್​ ಹಂಚುತ್ತೇನೆ ಎಂದು ಹೇಳುವ ಮೂಲಕ ಸ್ವರೂಪ್‌ಗೆ ಟಿಕೆಟ್‌ ನೀಡುವ ಸುಳಿವು ನೀಡಿದ್ದಾರೆ.

Share Post