Bengaluru

ತಾಲ್ಲೂಕು, ಜಿಲ್ಲಾ ಪಂಚಾಯತ್‌ ಚುನಾವಣೆಗೆ ಗಡುವು ನೀಡಿದ ಹೈಕೋರ್ಟ್‌

ಬೆಂಗಳೂರು; ರಾಜ್ಯದಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್‌ ಚುನಾವಣೆಗೆ ರಾಜ್ಯ ಹೈಕೋರ್ಟ್‌ ಗಡುವು ನಿಗದಿ ಮಾಡಿದೆ. ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಫೈನಲ್‌ ಆಗದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುತ್ತಾ ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್‌, ನಾಲ್ಕು ವಾರಗಳಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಬೇಕು ಹಾಗೂ ಮೀಸಲಾತಿ ಅಂತಿಮ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ. ಸಂವಿಧಾನದ ನಿಯಮದಂತೆ ಸೂಕ್ತ ಸಮಯಕ್ಕೆ ಚುನಾವಣೆ ನಡೆಸಬೇಕು. ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದೆ. ಇನ್ನು ನಾಲ್ಕು ವಾರಗಳಲ್ಲಿ ಎಲ್ಲವೂ ಅಂತಿಮವಾಗಬೇಕು ಎಂದು ಕೋರ್ಟ್‌ ಹೇಳಿದೆ.

 

Share Post