BengaluruCinemaCrime

ಉಪೇಂದ್ರಗೆ ರಿಲೀಫ್‌ ನೀಡಿದ ಹೈಕೋರ್ಟ್‌; ಎಫ್‌ಐಆರ್‌ಗೆ ಮಧ್ಯಂತರ ತಡೆ

ಬೆಂಗಳೂರು; ಬಂಧನದ ಭೀತಿ ಎದುರಿಸುತ್ತಿದ್ದ ನಟ ಉಪೇಂದ್ರಗೆ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಅವರ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡುವಂತೆ ಅವರು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌, ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿದೆ.

ಊರು ಅಂದ ಮೇಲೆ ಕೊಲಗೇರಿ ಇದ್ದೇ ಇರುತ್ತೆ ಎಂದು ಉಪೇಂದ್ರ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎರಡು ಠಾಣೆಗಳಲ್ಲಿ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಕೇಸ್‌ ದಾಖಲಿಸಲಾಗಿತ್ತು. ಇಂದು ವಿಚಾರಣೆಗೆ ಹಾಜರಾಗುವಂತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ನೋಟಿಸ್‌ ನೀಡಿದ್ದರು. ಆದ್ರೆ ಉಪೇಂದ್ರ ಅವರು ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದರು. ಇದೀಗ ಉಪೇಂದ್ರ ಅವರು ನಾನು ಉದ್ಧೇಶಪೂರ್ವಕವಾಗಿ ಆ ಹೇಳಿಕೆ ನೀಡಿಲ್ಲ. ಹೀಗಾಗಿ, ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ವಿಚಾರಣೆ ನಡೆಸಿರುವ ಏಕಸದಸ್ಯಪೀಠ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿದೆ.

 

Share Post