BengaluruPolitics

ಆಸ್ಪತ್ರೆಯಲ್ಲಿದ್ದುಕೊಂಡೇ ಹೆಚ್ಡಿಕೆ ರಣತಂತ್ರ; ರೋಡ್‌ ಮ್ಯಾಪ್‌ ಸಿದ್ಧತೆ

ಬೆಂಗಳೂರು; ಕಳೆದೆರಡು ತಿಂಗಳಿಂದ ಮಾಜಿ ಸಿಎಂ ಕುಮಾರಸ್ವಾಮಿಯವರು ನಿರಂತರವಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತೀವ್ರ ಜ್ವರ ಕಾಡಿದ್ದರಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೆ, ಅವರು ಆಸ್ಪತ್ರೆಯಲ್ಲೂ ಸುಮ್ಮನಿರದೆ ಚುನಾವಣಾ ರಣತಂತ್ರ ರೂಪಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಹೆಚ್ಡಿಕೆ, ಪ್ರಚಾರದ ರೂಟ್‌ ಮ್ಯಾಪ್‌ ಸಿದ್ಧಪಡಿಸುವಲ್ಲಿ ನಿರತರಾಗಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶ್ರಾಂತಿಯ ನಂತರ ಅವರು ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಅದಕ್ಕಾಗಿ ಅವರು ಆಸ್ಪತ್ರೆಯಲ್ಲೇ ಸಿದ್ಧತೆ ಆರಂಭಿಸಿದ್ದಾರೆ. ಜೆಡಿಎಸ್‌ ಕಾರ್ಯಕರ್ತರು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿದ್ದಾರೆ.

Share Post