Bengaluru

ಬೆಂಗಳೂರಲ್ಲಿ ರಾತ್ರಿಯಿಡೀ ಮಳೆ; ಇಬ್ಬರು ಕಾರ್ಮಿಕ ಸಾವು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿದ ರಣ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿರುವ ದುರ್ಘಟನೆ ನಡೆದಿದೆ.

ಇಲ್ಲಿನ ಉಲ್ಲಾಳ ಉಪನಗರದ ಬಳಿ ಘಟನೆ ನಡೆದಿದೆ. ಕಾವೇರಿ 5ನೇ ಹಂತದ ಕಾಮಗಾರಿಗೆ ಪೈಪ್‌ಲೈನ್ ಅಳವಡಿಸುವ ಕೆಲಸ ಮಾಡುತ್ತಿದ್ದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತದೇಹಗಳು ಪತ್ತೆಯಾಗಿವೆ. ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

 

Share Post