BengaluruCrime

ರಾಜ್ಯದ ಹಲವೆಡೆ ಗಾಳಿ ಸಹಿತ ಭಾರಿ ಮಳೆ; ಉರುಳಿದವು ಮರಗಳು

ಬೆಂಗಳೂರು; ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗಿದೆ. ವಿಪರೀತ ಗಾಳಿಯಿಂದಾಗಿ ಹಲವೆಡೆ ಮರಗಳು ನೆಲಕ್ಕುರುಳಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆ ಬಿದ್ದಿದ್ದರಿಂದಾಗಿ ಭಾರಿ ಗಾತ್ರದ ತೆಂಗಿನಮರವೊಂದು ಉರುಳಿಬಿದ್ದಿದ್ದು, ಎರಡು ಕಾರುಗಳು ಜಖಂಗೊಂಡಿವೆ.

ಒಂದು ಕಾರಿನಲ್ಲಿ ಯಾರೂ ಇರಲಿಲ್ಲ. ಅದನ್ನು ನಿಲ್ಲಿಸಲಾಗಿತ್ತು. ಆದ್ರೆ ಮತ್ತೊಂದು ಕಾರಿನಲ್ಲಿ ಮೂವರು ಕೂತಿದ್ದರು. ಆದ್ರೆ ಯಾರೂ ಇಲ್ಲದ ಕಾರು ಹೆಚ್ಚು ಜಖಂಗೊಂಡಿದೆ. ಜನ ಇದ್ದ ಕಾರಿನ ಮೇಲೆ ಮರಬಿದ್ದರೂ ಅವರು ಅದೃಷ್ಟವಶಾತ್‌ ಪರಾಗಿದ್ದಾರೆ.

ಇನ್ನು ಚಿಕ್ಕಮಗಳೂರು, ಹಾಸನ, ಬೆಂಗಳೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.

Share Post