Bengaluru

ಬೆಂಗಳೂರಿನಲ್ಲಿ ಭಾರಿ ಮಳೆ ; ವಾಹನ ಸವಾರರು ಪರದಾಟ

ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಶುರುವಾಯಿತು. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

  ಮಲ್ಲೇಶ್ವರ, ಶೇಷಾದ್ರಿಪುರಂ, ಮೆಜೆಸ್ಟಿಕ್‌, ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಮುಂತಾದ ಕಡೆ ಭಾರಿ ಮಳೆಯಾಗಿದೆ. ಇದರಿಂದಾಗಿ ಸಂಜೆ ಮನೆಗೆ ಹೋಗುವವರು ಪರದಾಡುವಂತಾಯಿತು.

Share Post