Bengaluru

ಇವತ್ತಿಂದ ಏಳು ದಿನ ಗುಡುಗು ಸಹಿತ ಭಾರೀ ಮಳೆ; ಎಲ್ಲೆಲ್ಲಿ ವರುಣಾರ್ಭಟ..?

ಬೆಂಗಳೂರು; ರಾಜ್ಯದಲ್ಲಿ ಈ ಚೆನ್ನಾಗಿ ಮಳೆಯಾಗುತ್ತಿದೆ.. ಈಗಾಗಳೇ ನದಿಗಳು, ಕೆರೆಗಳು ತುಂಬಿ ಹರಿಯುತ್ತಿವೆ.. ಇದೀಗ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಹೇಳುತ್ತಿದೆ.. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತದೆ.. ಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಭಾರೀ ಮಳೆಯಾಗುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ಇವತ್ತು ಕೂಡಾ ರಾಜ್ಯದ ಹಲವೆಡೆ ಮಳೆಯಾಗಲಿದೆ.. ಬೀದರ್‌, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಇವತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಇನ್ನು ಇವತ್ತು ಉಡುಪಿ ಉತ್ತರ ಕನ್ನಡದಲ್ಲಿ ಭಾರಿ ಮಳೆಯಾದರೆ ರಾಜ್ಯದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ..
ಯಾವತ್ತು ಎಲ್ಲೆಲ್ಲಿ ಮಳೆಯಾಗಲಿದೆ..?
=====================
ಆಗಸ್ಟ್‌ 24ರಂದು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಆಗಸ್ಟ್‌ 25ರಂದು ಬಾಗಲಕೋಟೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ
ಆಗಸ್ಟ್‌ 26ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ
ಆಗಸ್ಟ್‌ 27ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆ
ಆಗಸ್ಟ್‌ 28ರಂದು ಕರಾವಳಿ ಕರ್ನಾಟಕ, ಒಳನಾಡು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ

Share Post