Bengaluru

ಈ ಜಿಲ್ಲೆಗಳಲ್ಲಿ ಇನ್ನು 6 ದಿನಗಳ ಕಾಲ ಭರ್ಜರಿ ಮಳೆ; ಮುನ್ನೆಚ್ಚರಿಕೆ!

ಬೆಂಗಳೂರು; ಕೆಲ ದಿನಗಳಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, ಕೆಲವೆಡೆ ಮಳೆಯಿಂದಾಗಿ ತೊಂದರೆಯೂ ಆಗಿದೆ.. ಹವಾಮಾನ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ ಇನ್ನೂ ಆರು ದಿನ ಸತತವಾಗಿ ಮಳೆ ಸುರಿಯಲಿದೆ.. ಹೀಗಾಗಿ ಹಲವು ಜಿಲ್ಲೆಗಳ ಜನಕ್ಕೆ ಎಚ್ಚರಿಕೆ ನೀಡಲಾಗಿದೆ..

ಮೇ 18ರವರೆಗೆ ಬೆಂಗಳೂರು ಸೇರಿದ ರಾಜ್ಯದ ಹಲವೆಡೆ ಮಳೆ ಆಗಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.. ಬಾಗಲಕೋಟೆ, ಧಾರವಾಡ, ಗದಗ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ..  ಕೊಪ್ಪಳ, ಹಾವೇರಿ, ಹಾಸನ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಗುಡುಗು, ಗಾಳಿ ಸಹಿತ ಸಾಧಾರಣ ಮಳೆ ಸಾಧ್ಯತೆ ಎಂದಿದೆ. ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆ ಗುಡುಗು ಗಾಳಿ ಸಹಿತ ಹಗುರದಿಂದ ಸಾಧರಣ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share Post