Bengaluru

ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕಲು ಹೈಕೋರ್ಟ್‌ ನಕಾರ

ಬೆಂಗಳೂರು; ಬೆಂಗಳೂರಿನಲ್ಲಿ ಡಿಸೆಂಬರ್‌ 31ರಂದು ರಾತ್ರಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನೀರಾಕರಣೆ ಮಾಡಿದೆ. ವಕೀಲ ಎನ್.​ಪಿ.ಅಮೃತೇಶ್ ಅವರು ಈ ಸಂಬಂಧ ಪಿಐಎಲ್‌ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆವಿ ಅರವಿಂದ್ ಅವರಿದ್ದ ಪೀಠ‌ ವರ್ಷಾಚರಣೆಗೆ ನಿರ್ಬಂಧ ಹೇರಲು ನಿರಾಕರಿಸಿದೆ.

ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕಲು ಮನವಿ ಮಾಡಲಾಗಿತ್ತು. ಆದ್ರೆ ನ್ಯಾಯಪೀಠ ಇದನ್ನು ತಿಸ್ಕರಿಸಿದೆ. ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದ್ರೆ ಹೊರ ಪ್ರದೇಶಗಳಿಗೆ ಹೋಗಿ ಅಲ್ಲಿ ಸಂಭ್ರಮಾಚರಣೆ ಮಾಡುತ್ತಾರೆ. ಹೀಗಾಗಿ ಯಾವುದೇ ನಿರ್ಬಂಧದ ಅವಶ್ಯಕತೆ ಇಲ್ಲ. ಸದ್ಯಕ್ಕೆ ಕೊವಿಡ್‌ಗೆ ಹೆದರಬೇಕಾದ ಅವಶ್ಯಕತೆಯೂ ಇಲ್ಲ ಎಂದು ಕೋರ್ಟ್‌ ಹೇಳಿದೆ.

Share Post