Bengaluru

HIJAB CASE: ಬೆಂಗಳೂರಿಗೂ ಕಾಲಿಟ್ಟ ಹಿಜಾಬ್‌ ವಿವಾದ; ಚಂದ್ರಲೇಔಟ್‌ನಲ್ಲಿ ಗೊಂದಲ

ಬೆಂಗಳೂರು: ಹಿಜಾಬ್‌ (hijab) ವಿವಾದ ಬೆಂಗಳೂರಿನ ಶಾಲೆಗಳಿಗೂ ಕಾಲಿಟ್ಟಿದೆ. ಒಂದು ಕಡೆ ಕೋರ್ಟ್‌ ಅಂತಿಮ ತೀರ್ಪು ಬರುವವರೆಗೂ ಧರ್ಮದ ಗುರುತುಗಳಿಗೆ ಶಾಲೆಗಳಲ್ಲಿ ಅವಕಾಶವಿಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಹಿಜಾಬ್‌ಗೆ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತಡೆ ಒಡ್ಡಲಾಗಿದೆ. ಆದ್ರೆ ಇದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಚಂದ್ರಾ ಲೇಔಟ್​ನ ವಿದ್ಯಾಸಾಗರ್ ಶಾಲೆಯಲ್ಲಿ (vidyasagar schoool) ಹಿಜಾಬ್‌ ವಿಚಾರವಾಗಿ ಸಂಘರ್ಷ ನಡೆದಿದೆ. ಹಿಜಾಬ್ ಧರಿಸದಂತೆ ವಿದ್ಯಾರ್ಥಿನಿಯರಿಗೆ  ಶಾಲೆಯ ಶಿಕ್ಷಕರು ಸೂಚನೆ ನೀಡಿದ್ದಾರೆ.  ಈ ವಿಚಾರ ಗೊತ್ತಾಗಿ ಪೋಷಕರು ತರಗತಿಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. ಏಳನೇ ತರಗತಿ ವಿದ್ಯಾರ್ಥಿಗಳಿಗೆ ಹಿಜಾಬ್‌ ವಿಚಾರವಾಗಿ ಕಿರುಕುಳ ನೀಡಲಾಗುತ್ತಿದೆ. ಹಿಜಾಬ್‌ ಧರಿಸುವುದು ನಮ್ಮ ಹಕ್ಕು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ರಾಜೇಂದ್ರ ಕೂಡಾ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಪೋಷಕರು ಹಾಗೂ ಶಿಕ್ಷಕರ ಜೊತೆ ಚರ್ಚೆ ನಡೆಸಿದರು.

 

Share Post