Bengaluru

ಹಿಜಾಬ್‌ ವಿವಾದ; ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ವಿವಾದ ಜೋರಾಗುತ್ತಿದ್ದಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಲರ್ಟ್‌ ಆಗಿದ್ದಾರೆ. ಈ ಸಂಬಂಧ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮುಂತಾದವರು ಪಾಲ್ಗೊಂಡಿದ್ದರು.

ಸಿಎಂ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವ ನಾಗೇಶ್‌ ಅವರು, ಸಮವಸ್ತ್ರಕ್ಕೆ ಸಂಬಂಧಿಸಿದ ಸುತ್ತೋಲೆಯ ಸಿಎಂಗೆ ಮಾಹಿತಿ ನೀಡಿದ್ದಾರೆ. ಇನ್ನು ಹತ್ತನೇ ತರಗತಿವರೆಗೆ ಶಾಲೆಗಳಲ್ಲಿ ಯೂನಿಫಾರ್ಮ್‌ ವ್ಯವಸ್ಥೆ ಇದೆ. ಆದ್ರೆ ಇದನ್ನು ಎರಡನೇ ಪಿಯುಸಿ ವರೆಗೂ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇಂದೇ ಈ ಸಂಬಂಧ ಆದೇಶ ಹೊರಬೀಳು ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

Share Post