Bengaluru

ಕೋರ್ಟ್‌ ಆದೇಶದ ಆಧಾರದಲ್ಲಿ ಶಿಕ್ಷಣ ಕಾಯ್ದೆಯ ಗೊಂದಲ ನಿವಾರಿಸುತ್ತೇವೆ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

ಬೆಂಗಳೂರು; ಹಿಜಾಬ್‌ ವಿಚಾರವಾಗಿ ಹೈಕೋರ್ಟ್‌ ನೀಡಿರುವ ತೀರ್ಪಿನ ಆಧಾರದ ಮೇಲೆ ಕರ್ನಾಟಕ ಎಜುಕೇಷನ್‌ ಆಕ್ಟ್‌ನಲ್ಲಿನ ಒಂದಷ್ಟು ವಿಚಾರಗಳಲ್ಲಿನ ಗೊಂದಲಗಳನ್ನು ನಿವಾರಿಸುವ ಪ್ರಯತ್ನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ. ಹಿಜಾಬ್‌ ವಿಚಾರವಾಗಿ ಹೈಕೋರ್ಟ್‌ ನೀಡಿದ ತೀರ್ಪಿಗೆ ಪ್ರತಿಕ್ರಿಯೆ ನೀಡಿದ ಅವರು, ಸಮವಸ್ತ್ರದಿಂದ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವನೆ ಮೂಡಲಿದೆ. ಹೀಗಾಗಿ ಎಲ್ಲರೂ ಕೋರ್ಟ್‌ ಆದೇಶ ಪಾಲಿಸಬೇಕು ಎಂದು ಮನವಿ ಮಾಡಿದರು.

ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಧರಿಸುವುದರಿಂದ ಸಮಾನತೆ ಕಾಪಾಡಿದಂತೆ ಆಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವನೆ ಮೂಡಲಿದೆ. ಹೀಗಾಗಿ, ಯಾರೂ ಕೂಡಾ ಇದನ್ನು ವಿರೋಧ ಮಾಡಬಾರದು. ಕೋರ್ಟ್‌ ತೀರ್ಪಿಗೆ ಬೆಲೆ ನೀಡಿ, ಎಲ್ಲರೂ ಶಾಲೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

Share Post