Bengaluru

HIJAB VERDICT: ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆಬಾಗಬೇಕು; ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಹಿಜಾಬ್‌ ವಿಚಾರ ಸಂಬಂಧ ಹೈಕೋರ್ಟ್‌ ಆದೇಶಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು,  ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆಬಾಗಬೇಕು. ಇದರಲ್ಲಿ ಯಾವುದೇ ಒಂದು ಪಕ್ಷ ಅಥವಾ ಗುಂಪಿನ ಗೆಲುವು ಇಲ್ಲ ಎಂದು ಹೇಳಿದ್ದಾರೆ. 

ಹಿಜಾಬ್‌ ವಿಚಾರವಾಗಿ ವಿವಾದ ಏರ್ಪಟ್ಟಿತ್ತು. ಈ ವಿಚಾರವಾಗಿ ಕೆಲವರು ಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್‌ ಈ ಸಂಬಂಧ ತೀರ್ಪು ನೀಡಿದೆ. ಅದನ್ನು ನಾವು ಗೌರವಿಸಲೇಬೇಕಾಗುತ್ತದೆ. ಹಾಗಂತ ಈ ತೀರ್ಪು ಯಾರ ಗೆಲುವೂ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದೇಶವನ್ನು ಆದೇಶದ ರೀತಿಯಲ್ಲಿ ಅರ್ಥ ಮಾಡಿಕೊಳ್ಳಬೇಕು, ಅನುಸರಿಸಬೇಕು. ಆದೇಶವನ್ನು ಸಂಪೂರ್ಣ ನೋಡಿ ಪ್ರತಿಕ್ರಿಯಿಸುತ್ತೇನೆ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ತಿಳಿಸಿದರು.

Share Post