Bengaluru

HIJAB VERDICT: ಮೇಲ್ಮನವಿ ಸಲ್ಲಿಸುವ ಅವಕಾಶ ಮುಕ್ತವಾಗಿದೆ; ಯು.ಟಿ.ಖಾದರ್‌

ಬೆಂಗಳೂರು; ಹಿಜಾಬ್‌ ವಿಚಾರವಾಗಿ ಹೈಕೋರ್ಟ್ ನೀಡಿರುವ​ ತೀರ್ಪನ್ನು ಎಲ್ಲ ಸಮುದಾಯಗಳೂ ಗೌರವಿಸುತ್ತವೆ ಎಂದು ಕಾಂಗ್ರೆಸ್‌ ನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಕೋರ್ಟ್‌ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ತೀರ್ಪಿನಿಂದಾಗಿ ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಹೇಳಿದರು. 

   ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಮುಕ್ತವಾಗಿದೆ. ಸಮಾನತೆ ಬೇಕಾದರೆ  ಹೆಣ್ಣು ಮಕ್ಕಳಿಗೆ ಶಿಕ್ಷಣ ಮುಖ್ಯ. ಶಾಲಾ ಮಟ್ಟದಲ್ಲಿ ಬಗೆಹರಿಸಬಹುದಾಗಿದ್ದ ಸಮಸ್ಯೆ ಕೋರ್ಟ್​ವರೆಗೆ ಬರಬೇಕಾದ ಅಗತ್ಯ ಇರಲಿಲ್ಲ ಎಂದು ಯು.ಟಿ.ಖಾದರ್  ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Share Post