BengaluruCrime

ಡಿ.ಕೆ.ಶಿವಕುಮಾರ್‌ ಒಡೆತನದ ಹಿಲ್‌ವ್ಯೂ ಶಾಲೆಗೆ ಬಾಂಬ್‌ ಬೆದರಿಕೆ

ಬೆಂಗಳೂರು;  ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್‌ ಹಿಲ್‌ ವ್ಯೂ ಶಾಲೆಗೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಶಾಲೆಗೆ ಇ-ಮೇಲ್‌ ಕಳುಹಿಸಿರುವ ದುಷ್ಕರ್ಮಿಗಳು, ನಿಮ್ಮ ಶಾಲೆಯಲ್ಲಿ ಬಾಂಬ್‌ ಇಟ್ಟಿದ್ದೇವೆ ಎಂದು ಹೇಳಿದ್ದಾರೆ. ಇದರನ್ನು ನೋಡುತ್ತಿದ್ದಂತೆ ಶಾಲೆ ಸಿಬ್ಬಂದಿ ಆತಂಕಗೊಂಡಿದ್ದಾರೆ. ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿದ್ದಾರೆ.

 

ಸ್ಥಳಕ್ಕೆ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಆಗಮಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಕೆಲ ತಿಂಗಳ ಹಿಂದೆ ಕೂಡಾ ಒಂದೇ ದಿನ ಹದಿನೈದಕ್ಕೂ ಹೆಚ್ಚು ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ ಮೇಲ್‌ ಕಳಿಹಿಸಲಾಗಿತ್ತು. ಆದರೆ ಅಲ್ಲಿ ಯಾವುದೇ ಬಾಂಬ್‌ ಪತ್ತೆಯಾಗಿರಲಿಲ್ಲ. ಇ-ಮೇಲ್‌ ಕಳುಹಿಸಿದವರನ್ನು ಹುಡುಕಲು ಇನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗಲೇ ಮತ್ತೊಂದು ಶಾಲೆಗೆ ಬಾಂಬ್‌ ಬೆದಿರಿಕೆ ಬಂದಿದೆ.

 

Share Post